ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ.
ಈ ಹಗರಣದಲ್ಲಿ ಉನ್ನತ ಮಟ್ಟದಲ್ಲಿರುವವರೂ ಸಹ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು.ವಾಲ್ಮೀಕಿ ನಿಗಮ ಹಗರಣದಲ್ಲಿ ʼ ಇಡಿ ʼ ಗೆ ತಪ್ಪಿತಸ್ಥರ ಹುಡುಕುವ ಉದ್ದೇಶ ಇಲ್ಲJaggeryಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ ವನ್ನು ಬಳಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಕೆಲವು ಪ್ರತಿಷ್ಠಿತ ಸುದ್ದಿಸಂಸ್ಥೆಗಳು ಸಂಶೋಧನಾ ಸಂಸ್ಥೆಗಳು ಈ ಬಗ್ಗೆ ಅಧ್ಯಯನ ಮಾಡಿವೆ. 2014ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ದೇಶದಲ್ಲಿ ಇಡಿ ದಾಖಲಿಸುವ ಪ್ರಕರಣಗಳ ಸಂಖ್ಯೆ ಶೇ.400 ರಷ್ಟು ಹೆಚ್ಚಾಗಿದೆ. ಅದರಲ್ಲಿ ಶೇ.95 ರಷ್ಟು ಪ್ರಕರಣಗಳು ವಿಪಕ್ಷಗಳ ವಿರುದ್ಧವಾಗಿದೆ. ಶೇ.5 ರಷ್ಟು ಮಾತ್ರ ಬಿಜೆಪಿ ಅಥವಾ ಮಿತ್ರ ಪಕ್ಷಗಳ ಮೇಲೆ ಗುರಿಯಾಗಿದೆ. ಈ ಅಂಕಿಅಂಶಗಳೆಲ್ಲವೂ ಬಿಜೆಪಿ ವಾಷಿಂಗ್ ಮೆಷಿಂಗ್ ಪಕ್ಷ ಎಂಬುದನ್ನು ಸಾಬೀತುಪಡಿಸುತ್ತಿವೆ. ವಿಪಕ್ಷದಲ್ಲಿದ್ರೆ ಕೇಸು, ಬಿಜೆಪಿಗೆ ಸೇರಿದ ಕೂಡಲೇ ಖುಲಾಸೆಯ ಚೀಟಿ ಎಂಬುದನ್ನು ಒತ್ತಿ ಹೇಳುತ್ತಿವೆ.
ಮುಂದುವರೆದು, ವಾಲ್ಮೀಕಿ ನಿಗಮದ ಹಗರಣದ ಸ್ವರೂಪದಂತೆಯೇ ಈ ಹಿಂದೆ ಡಾ. ಅಂಬೇಡ್ಕರ್ನಿಗಮದಲ್ಲೂ ಹಗರಣವಾಗಿದೆ. ಈ ಬಗ್ಗೆ ಏಕೆ ತನಿಖೆ ಇಲ್ಲ. ಕೋವಿಡ್ ಸಂದರ್ಭದಲ್ಲಿ ಹೆಣಗಳು ಬೀಳ್ತಾ ಇದ್ರೆ, ಬಿಜೆಪಿ ನಾಯಕರು ಹೆಣಗಳ ಮೇಲೆ ಹಣ ಮಾಡ್ತಾ ಇದ್ರಲ್ಲ ಆ ಬಗ್ಗೆ ತನಿಖೆ ಏಕಿಲ್ಲ. ಹಾಗಾದ್ರೆ ಅದು ಹಗರಣ ಅಲ್ವ. ಬಿಜೆಪಿಯ ಶಾಸಕರೇ ಒಬ್ಬರು ಪಕ್ಷದ ಅಧ್ಯಕ್ಷ ವಿಜಯೇಂದ್ರ ಆಗಾಗ್ಗೆ ದುಬೈ ಹೋಗಿಬರುತ್ತಿರುವ ಬಗ್ಗೆ ದ್ವನಿ ಎತ್ತುತ್ತಿದ್ದಾರಲ್ಲ ಆ ಬಗ್ಗೆ ತನಿಖೆ ಏಕಿಲ್ಲ ಎಂದು ಗುಡುಗಿದರು.
ಪ್ರಜಾಪ್ರಭುತ್ವದ ಕಗ್ಗೊಲೆಗೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ಪಕ್ಷ ಆ ನಿಲುವಿನಲ್ಲಿ ದೃಢವಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಹೆದರಿಕೆ ಬೆದರಿಕೆ ದಬ್ಬಾಳಿಕೆಗೆ ನಾವು ಬಗ್ಗಲ್ಲ. ದೇಶದ ಜನ ಎರಡು ತಿಂಗಳ ಹಿಂದೆ ಅವರಿಗೆ ಪಾಠ ಕಲಿಸಿದ್ದರು. ಇನ್ನೂ ಪಾಠ ಕಲಿಯದಿರುವುದು ದುರಂತ. ಅವರ ಅವನತಿಗೆ ಅವರೇ ಗುಳಿ ತೋಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
State Government ED CBI Enforcement Directorate BJP Government Minister Krishna Byregowda ಕೃಷ್ಣ ಬೈರೇಗೌಡ ರಾಜ್ಯ ಸರ್ಕಾರ ಇಡಿ ಸಿಬಿಐ ಜಾರಿ ನಿರ್ದೇಶನಾಲಯ ಬಿಜೆಪಿ ಸರ್ಕಾರ ಸಚಿವ ಕೃಷ್ಣ ಬೈರೇಗೌಡ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಂಕೋಲ ಗುಡ್ಡ ಕುಸಿತ ಪ್ರಕರಣ: ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಅಗ್ನಿಶಾಮಕ ದಳ ಹಾಗೂ NDRF ತುಕಡಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರೂ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
और पढो »
ಈ ಐದು ಟ್ರಿಕ್ಸ್ ನಿಮಗೆ ಗೊತ್ತಿದ್ದರೆ ನಿಮ್ಮ WhatsApp account ಎಂದಿಗೂ ಹ್ಯಾಕ್ ಆಗುವುದಿಲ್ಲ !ನಿಮ್ಮ ಅಕೌಂಟ್ ಅನ್ನು ಸುರಕ್ಷಿತವಾಗಿ ಇಡುವುದು ಬಹಳ ಮುಖ್ಯವಾಗಿದೆ.ಇಂದು ನಾವು ಈ ಬಗ್ಗೆ 5 ಸುಲಭ ಸಲಹೆಗಳನ್ನು ನೀಡಲಿದ್ದೇವೆ.
और पढो »
ರಾಜ್ಯದಲ್ಲಿ 13,477 ಬಾಲ ಗರ್ಭಿಣಿ ಪ್ರಕರಣ : ಆತಂಕ ಮೂಡಿಸಿದ ಅಂಕಿ ಅಂಶTeenage pregnancy: ಕರ್ನಾಟಕದಂಥ ಪ್ರಗತಿಶೀಲ ರಾಜ್ಯ ಬಾಲಗರ್ಭಿಣಿಯರ ಪ್ರಮಾಣ ಹೆಚ್ಚುತ್ತಿರುವುದು ಪ್ರಗತಿಪರ ಕರುನಾಡು ನಾಚಿಕೆ ಪಡುವಂಥ ವಿಚಾರವಾಗಿದೆ.
और पढो »
ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ? ಡಿಸಿಎಂ ಡಿಕೆ ಶಿವಕುಮಾರ್ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೇಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್, ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:
और पढो »
ಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರ ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
और पढो »
“ಭಾರತದ ಈ ಕ್ರಿಕೆಟಿಗನೆಂದರೆ ನನಗೆ ತುಂಬಾ ಇಷ್ಟ, ಈತನಲ್ಲಿ ನನ್ನನ್ನು ನಾನು ನೋಡಿದೆ”: ಸರ್ವಶೇಷ್ಠ ದಿಗ್ಗಜ ವಿವಿಯನ್ ರಿಚರ್ಡ್ಸ್Vivian Richards on Virat Kohli: ಸಚಿನ್ ತೆಂಡೂಲ್ಕರ್ ಅಥವಾ ರಿಕಿ ಪಾಂಟಿಂಗ್ ಆಗಿರಲಿ, ಪ್ರತಿಯೊಬ್ಬ ಶ್ರೇಷ್ಠ ಕ್ರಿಕೆಟಿಗರು ವಿರಾಟ್ ಅವರನ್ನು ಹೊಗಳಿರುವುದನ್ನು ನಾವು ನೋಡಿರಬಹುದು.
और पढो »