ಚನ್ನಪಟ್ಟಣ: “ಕುಮಾರಸ್ವಾಮಿ, ನಾನು ಕೃಷಿ ಜತೆಗೆ ಉದ್ಯಮವನ್ನು ನಡೆಸುತ್ತಿದ್ದೇನೆ. ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ? ನೀನು ಹಿಟ್ ಅಂಡ್ ರನ್, ಬ್ಲಾಕ್ ಮೇಲರ್” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹರಿಹಾಯ್ದರು.
“ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ ಹೇಳಿಲ್ಲ. ನಾನು ಪಂಚೆಯುಟ್ಟು ಹೊಲ ಉಳುಮೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದೀಯ. ಮಣ್ಣಿನ ಮಗ ಎಂದು ಹೇಳಿದ್ದೀಯ. ನಿಮ್ಮ ತಂದೆ ಮಣ್ಣಿನ ಮಗನಾಗಿರಬಹುದು. ಆದರೆ ನೀವಲ್ಲ”ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿAishwarya Rai
“ನನ್ನ ಮೇಲೆ, ನನ್ನ ಧರ್ಮಪತ್ನಿ, ನನ್ನ ಸಹೋದರಿ, ನನ್ನ ಸಹೋದರನ ಮೇಲೆ ನೀವು ಕೇಸ್ ದಾಖಲಿಸಿ ಏನು ಮಾಡಿದಿರಿ? ಏನು ಮಾಡಲು ಆಗಿಲ್ಲ. ಮಿಲಿಟರಿಯವರು ಬಂದು ನನ್ನನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ನೀನು ಹೇಳಿದ್ದೀಯಾ. ಹಾಗಿದ್ದರೆ ನಾನು ಜೈಲಲ್ಲಿ ಇದ್ದಾಗ ಯಾಕೆ ಬಂದು ನನ್ನನ್ನು ನೋಡಿದೆ? ನನ್ನ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಅದು ಗೊತ್ತಿದೆಯೇ? ನನ್ನ ಕುಟುಂಬದವರ ಮೇಲೆ ಹಾಕಿಸಿದ್ದ ಕೇಸು ವಜಾ ಆಗಿದೆ ಗೊತ್ತಿದೆಯಾ?” ಎಂದು ಕುಟುಕಿದರು.
“ಪಾದಯಾತ್ರೆಗೆ ಬರಲ್ಲ ಎಂದು ಹೇಳಿದವನು, ಈಗ ಯಾಕೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದೀಯಾ? ಕೇವಲ ನಿನ್ನ ಅಧಿಕಾರಕ್ಕೋಸ್ಕರ. ನಿನ್ನ ಪಕ್ಷವನ್ನು ಮುಳುಗಿಸಲು ಹೊರಟಿದ್ದೀಯಾ” ಎಂದು ಮಾತಿನ ಮೂಲಕ ತಿವಿದರು.“ಇನ್ನು ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ದಿನಕ್ಕೊಂದು ಮಾತನಾಡಿದ್ದಾರೆ. ಮೊದಲು ರೇವಣ್ಣ ಕುಟುಂಬ ಬೇರೆ, ನಮ್ಮ ಕುಟುಂಬ ಬೇರೆ ಎಂದರು. ಮೊದಲು ಡಿ.ಕೆ.ಶಿವಕುಮಾರ್ ಪೆನ್ ಡ್ರೈವ್ ಹಂಚಿದ್ದಾರೆ ಎಂದರು. ಕುಮಾರಸ್ವಾಮಿ ಶಿವಕುಮಾರ್ ಎಂದಿಗೂ ನೇರವಾಗಿ ಹೋರಾಟ ಮಾಡುವವನು. ಈ ರೀತಿ ಹಿಂದೆ ನಿಂತು ಯುದ್ಧ ಮಾಡುವುದಿಲ್ಲ ಎಂದು ನಿಮಗೂ ಗೊತ್ತಿದೆ. ಈಗಾಗಲೇ ನೀನು ನನ್ನ ವಿರುದ್ಧ ಹೋರಾಡಿ ಸೋತಿದ್ದೀಯಾ.
“ಕೇಂದ್ರ ಸರ್ಕಾರ ನಿನಗೆ ಎರಡು ಖಾತೆ ನೀಡಿದೆ. ನೀನು 10 ಸಾವಿರ ಜನರಿಗೆ ಕೆಲಸ ಕೊಡುವ ಕಾರ್ಖಾನೆ ಆರಂಭಿಸುತ್ತೇನೆ ಎಂದು ಹೇಳಿಕೆ ನೀಡಿದ್ದೀಯ. ಸಂತೋಷ ಆ ಕೆಲಸ ಮಾಡು. ನಮ್ಮ ಸರ್ಕಾರದಿಂದ ನಾವು ಸಹಕಾರ ನೀಡುತ್ತೇವೆ. ನೀವು ಎಲ್ಲೆಲ್ಲಿ ಅಂಗಡಿ ಇಟ್ಟಿದ್ದೀರಿ ನನಗೆ ಗೊತ್ತಿದೆ. ನೀನು ಅಧಿಕಾರದಲ್ಲಿದ್ದಾಗ ನಿನ್ನ ಜನರಿಗೆ ಒಂದು ಮನೆ, ನಿವೇಶನ ನೀಡಲಿಲ್ಲ. ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ನೀಡಲಿಲ್ಲ. ನೀನು ನಿನ್ನ ಕುಟುಂಬ ಮಾತ್ರ ಅಧಿಕಾರ ಅನುಭವಿಸಿದ್ದೇ ಆಯ್ತು. ಯಡಿಯೂರಪ್ಪನವರು ಸದನದಲ್ಲಿ ನಿನ್ನ ಬಗ್ಗೆ ಮಾಡಿರುವ ಭಾಷಣದ ಬಗ್ಗೆ ನೀನು ಉತ್ತರ ನೀಡು ಸಾಕು” ಎಂದು ಸವಾಲೆಸೆದರು.
“ಜಾತ್ಯಾತೀತ ತತ್ವ ಉಳಿಸಲು ನಾನು, ಪರಮೇಶ್ವರ್, ಸಿದ್ದರಾಮಯ್ಯ ಅವರು ನಿನ್ನನ್ನು ಮುಖ್ಯಮಂತ್ರಿ ಮಾಡಿದಾಗ, ಯಡಿಯೂರಪ್ಪನವರು ನಿನ್ನ ಬಗ್ಗೆ ಎಚ್ಚರಿಕೆ ನೀಡಿದರು. 'ಡಿ.ಕೆ. ಶಿವಕುಮಾರ್, ಈ ಅಪ್ಪ ಮಕ್ಕಳ ಬಗ್ಗೆ ಹುಷಾರಾಗಿರಿ ಎಂದು ಹೇಳಿದ್ದರು'. ನೀನು ರಾಜ್ಯಪಾಲರ ಮೂಲಕ ಅವರನ್ನು ಜೈಲಿಗೆ ಕಳುಹಿಸಿದೆ. ಈಗ ಅವರನ್ನೇ ತಬ್ಬಾಡುತ್ತಿದ್ದೀಯಾ?” ಎಂದು ಲೇವಡಿ ಮಾಡಿದರು.
ಚನ್ನಪಟ್ಟಣ ಕುಮಾರಸ್ವಾಮಿ ಜನಾಂದೋಲನ ಸಭೆ ಡಿಸಿಎಂ ಡಿಕೆ ಶಿವಕುಮಾರ್ ಡಿನೋಟಿಫಿಕೇಶನ್ ಪ್ರಕರಣ DCM DK Shivakumar Channapatna Kumaraswamy Janandola Sabha DCM DK Shivakumar Denotification Case
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.
और पढो »
ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು: ಡಿಸಿಎಂ ಡಿಕೆ ಶಿವಕುಮಾರ್ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, “ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್ ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ.
और पढो »
ದರ್ಶನ್ ಪತ್ನಿ ವಿಜಯಲಕ್ಷ್ಮಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಈ ಕಾರಣಕ್ಕೆ!Vijayalakshmi Darshan Met DK Shivakumar: ವಿಜಯಲಕ್ಷ್ಮಿ ದರ್ಶನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಅವರನ್ನು ಭೇಟಿಯಾಗಿರುವುದು ಪತಿಯ ವಿಚಾರಕ್ಕಾಗಿ ಅಲ್ಲ, ತಮ್ಮ ಮಗ ವಿನೀಶ್ (Vinish) ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಎಂದು ತಿಳಿದುಬಂದಿದೆ. ಈ
और पढो »
ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್
और पढो »
ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ:ಡಿಸಿಎಂ ಡಿ.ಕೆ. ಶಿವಕುಮಾರ್ಮೂಡಾ ಹಗರಣ ವಿರೋಧಿಸಿ ವಿರೋಧಪಕ್ಷಗಳು ನಡೆಸಲು ಹೊರಟಿರುವ ಪಾದಯಾತ್ರೆ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.
और पढो »