ಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ #GoBackModi, #GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
LokSabha Elections 2024: ಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರWhite HairShukra Budh Yutiಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಹಾಗೂ ನಾಡಿನ ರೈತರನ್ನು ದ್ವೇಷಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸೆಪ್ಟೆಂಬರ್ 22 ರಂದು ಬರಪರಿಹಾರ ಕೋರಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಕೇಂದ್ರ ತಂಡ 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ಮಧ್ಯೆ ಸಚಿವ ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂತಹ ಬರಗಾಲ ಎದುರಾಗಿದೆ.
18,172 ಕೋಟಿ ಬರಪರಿಹಾರವನ್ನು ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಒತ್ತಾಯ ಮಾಡಿದ್ದೇವೆ. ಇದನ್ನು ನೀಡಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ತಿಳಿಸುವುದಾಗಿಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ.
15ನೇ ಹಣಕಾಸು ಆಯೋಗ ಪೆರಿಫೆರಲ್ ರಿಂಗ್ರೋಡ್ಗೆ ₹3,000 ಕೋಟಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ₹3,000 ಕೋಟಿ ಕೊಡಿ ಎಂದು ಶಿಫಾರಸು ಮಾಡಿದ್ದರೂ ಕೊಡಲಿಲ್ಲ. ಬರಪರಿಹಾರಕ್ಕೂ ಒಂದು ರೂ.ಇಲ್ಲ. ಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ #GoBackModi, #GoBackAmitShah ಎಂದು ಹೇಳುತ್ತಿದ್ದೇವೆ. ಅಮಿತ್ ಶಾ ಅವರು ಹೈಪವರ್ ಕಮಿಟಿ ಸಭೆ ನಡೆಸಿ ₹18,171 ಕೋಟಿ ಕೊಟ್ಟು ಆಮೇಲೆ ರಾಜ್ಯಕ್ಕೆ ಬರಲಿʼ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Siddaramaiah Narendra Modi BJP Government Congress Government Priyanka Gandhi Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
और पढो »
Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
और पढो »
ಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆCM : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು.
और पढो »
Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
और पढो »
ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ?- ಸಿಎಂ ಸಿದ್ದರಾಮಯ್ಯMekedatu Project: ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹವನ್ನು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿ ಪ್ರಶ್ನಿಸಿದವರು ಡಿಕೆ ಸುರೇಶ ಮಾತ್ರ. ಇವರು ಗೆದ್ದರೆ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡ್ತಾರೆ.ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಮನವಿ ಮಾಡಿದರು.
और पढो »
ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
और पढो »